
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಸಾಣೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಾಣೂರು ಶಾಂಭವಿ ಸೇತುವೆಯ ಬಳಿ ರಸ್ತೆಗೆ ಅಡ್ಡಲಾಗಿ ಬೆಳೆದಿರುವ ಗಿಡಗಳ ಮತ್ತು ಸೇತುವೆಯ ಮೇಲೆ ರಸ್ತೆಯಲ್ಲಿ ಹರಡಿರುವ ಕೇಸರು ತ್ಯಾಜ್ಯ ಕಸಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂಧರ್ಭ ಕಾರ್ಕಳ ಶೌರ್ಯ ಘಟಕದ ಕ್ಯಾಪ್ಟನ್ ನವೀನ್, ಶಾಶಕರು ವಿ. ಸುನಿಲ್ ಕುಮಾರ್ ಸೇವಾಕಾರ್ಯ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಶೌರ್ಯ ಘಟಕದ ಸೇವೆಗೆ ಅಭಿನಂದನೆ ಸಲ್ಲಿಸಿ ರಾಜ್ಯದಲ್ಲಿ ಅತ್ಯುತ್ತಮ ಘಟಕವಾಗಿ ಮೂಡಿಬರಲೆಂದು ಶುಭಹಾರೈಸಿದರು, ಈ ಸ್ವಚ್ಛತಾ ಕಾರ್ಯದಲ್ಲಿ ಸಾಣೂರು ಗ್ರಾಮ ಪಂಚಾಯತಿನ ಅಧ್ಯಕ್ಷ ಯುವರಾಜ್ ಜೈನ್, ಪ್ರವೀಣ್ ಕೋಟ್ಯಾನ್, ನರಸಿಂಹ ಕಾಮತ್,ಸಾಣೂರು ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಮತ್ತು ಸದಸ್ಯರು ಉಪಸ್ಥಿತರಿದ್ದರು.