
ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಾಣೂರು ಇವರಿಂದ ಪಡ್ಡಾಯಿಗುಡ್ಡೆ ಪರಿಸರದ ವಿದ್ಯುತ್ ಕಂಬಗಳಿಗೆ ತಾಗುವ ಮರದ ಗೆಲ್ಲುಗಳನ್ನು ತೆರವುಗೊಳಿಸಲಾಯಿತು.
ಈ ಸಂಧರ್ಭ ಮೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದು ಸೇವಾಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದರು ಹಾಗೂ ವಲಯದ ಮೇಲ್ವಿಚಾರಕರು ಪ್ರಸಾದ್ ಭೇಟಿ ನೀಡಿ ಶ್ರಮದಾನದಲ್ಲಿ ಪಾಲ್ಗೊಂಡ ಎಲ್ಲಾ ಸ್ವಯಂ ಸೇವಕರಿಗೆ ಶುಭಹಾರೈಸಿದರು.