27 C
Udupi
Sunday, April 12, 2026
spot_img
spot_img
HomeBlogಸಾಮಾಜಿಕ ಶಾಂತಿ ಕೆದಡುವ ಕಾರ್ಯ ಮಾಡುತ್ತಿರುವ ಕಾರ್ಕಳ ಪುರಸಭಾ ಸದಸ್ಯ ಶುಬಧ ರಾವ್‌ ವಿರುದ್ಧ ಕಾರ್ಕಳ...

ಸಾಮಾಜಿಕ ಶಾಂತಿ ಕೆದಡುವ ಕಾರ್ಯ ಮಾಡುತ್ತಿರುವ ಕಾರ್ಕಳ ಪುರಸಭಾ ಸದಸ್ಯ ಶುಬಧ ರಾವ್‌ ವಿರುದ್ಧ ಕಾರ್ಕಳ ಬಿಜೆಪಿ ಯುವ ಮೋರ್ಚಾದಿಂದ ದೂರು

ಜುಲೈ 12 ರಂದು ಕಾರ್ಕಳ ಪೆರ್ವಾಜೆ ಬಿಲ್ಲವ ಸಂಘದ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸರಕಾರಿ ಕಾರ್ಯಕ್ರಮದ ನಿಯಮಾವಳಿಯನ್ನು ಧಿಕ್ಕರಿಸಿ ಸಾಮಾಜಿಕ ಶಾಂತಿ ಕೆದಡುವ ಕೃತ್ಯ ಮಾಡಿದ ಕಾಂಗ್ರೆಸ್ ಪಕ್ಷದ ಕಾರ್ಕಳ ಪುರಸಭೆ ಸದಸ್ಯ ಶುಭದ್ ರಾವ್ ರವರ ಮೇಲೆ ಇಂದು ಬಿಜೆಪಿ ಯುವ ಮೋರ್ಚಾ ಕಾರ್ಕಳ ಮಂಡಲದ ಪದಾಧಿಕಾರಿಗಳು ದೂರು ನೀಡಿದ್ದಾರೆ.

ಕಾನೂನುಬಾಹಿರವಾಗಿ ತನ್ನ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಲ್ಲದೆ ಅದನ್ನು ಪ್ರಶ್ನಿಸಿದ ಅಧಿಕಾರಿಯ ವಿರುದ್ಧ ಏರು ದನಿಯಲ್ಲಿ ಮಾತಾಡಿ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ರಾವ್‌ ಶಾಂತಿ ಭಂಗ ಮಾಡಿರುತ್ತಾರೆ ಹಾಗೂ ಕೆಲವು ತಿಂಗಳ ಹಿಂದೆಯೂ ಕೂಡ ಬೈಲೂರಿನ ಉಮಿಕಲ್ ಬೆಟ್ಟಕ್ಕೆ ಕಾನೂನುಬಾಹಿರವಾಗಿ ತೆರಳಿ, ಪರಶುರಾಮ ಮೂರ್ತಿಯ ಭಾಗಗಳನ್ನು ಕಿತ್ತು ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿರುತ್ತಾರೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಕಳ ಶಾಸಕರನ್ನು ತುಚ್ಛ ಶಬ್ದಗಳಿಂದ ನಿಂದನೆ ಕೂಡ ಮಾಡಿದ್ದಾರೆ. ಇಂತಹ ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳಲ್ಲಿ ಈ ರೀತಿ ವರ್ತನೆ ಮಾಡುವುದು ಸಮಾಜದಲ್ಲಿ ಅಹಿತಕರ ಘಟನೆ ನಡೆಯುವಂತೆ ಪ್ರಚೋದನೆ ಮಾಡುವುದಲ್ಲದೇ, ಸಾರ್ವಜನಿಕ ಶಾಂತಿ ಭಂಗ ಹಾಗು ವೈಯಕ್ತಿಕ ನಿಂದನೆಯನ್ನು ಕೂಡ ಮಾಡುತ್ತಿದ್ದಾರೆ. ಇಂತಹ ಶಾಂತಿ ಕೆದಡುವ ಕಾರ್ಯಗಳು ಮರುಕಳಿಸಬಾರದು ಎಂದು ಶುಭದ್ ರಾವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ಮಂಡಲದಿಂದ ದೂರು ಸಲ್ಲಿಸಲಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page