
ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿ ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ನನಗೆ ಯಾವುದೇ ಪತ್ರ ಅಥವಾ ದೂರು ಬಂದಿಲ್ಲ. ಸೂರಜ್ ರೇವಣ್ಣ ಆಗಲಿ, ಆ ದೂರುದಾರ ಆಗಲಿ ಎಲ್ಲಿಯೂ ದೂರು ಕೊಟ್ಟಿಲ್ಲ. ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ಕೊಟ್ಟಿದ್ದಾರೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಸಿಐಡಿಗೆ ಕೊಡುವ ನಿರ್ಧಾರ ಮಾಡ್ತೇವೆ ಎಂದು ವಿವರಿಸಿ ಹೇಳಿದ್ದಾರೆ.