
ದೇಶದಲ್ಲಿಯೇ ಸಂಚಲನ ಸೃಷ್ಟಿಸಿದ ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ ಪ್ರಕರಣದ ತನಿಖೆಯ ಜವಾಬ್ದಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿ ಹೊಂದಿರುವ ಕನ್ನಡಿಗ ದಯಾನಾಯಕ್ಗೆ ವಹಿಸಲಾಗಿದೆ.
ಚಾಕು ಇರಿದ ಎನ್ನಲಾದ ಆರೋಪಿ ಚಹರೆ ಸಹ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಗುರುವಾರವೇ ಕ್ರೈಂ ಬ್ರಾಂಚ್ ಅಧಿಕಾರಿಗಳ ತಂಡದೊಂದಿಗೆ ಅವರ ನಿವಾಸಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 80 ಅಧಿಕ ಕುಖ್ಯಾತ ಭೂಗತ ಗ್ಯಾಂಗ್ಸ್ಟರ್ಗಳ ಎನ್ಕೌಂಟರ್ ಮಾಡಿದ ಖ್ಯಾತಿಯ ದಯಾ ನಾಯಕ್, ಸೈಫ್ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಇಳಿದಿದ್ದಾರೆ.
ಕರ್ನಾಟಕದ ಉಡುಪಿ ಮೂಲದ ದಯಾನಾಯಕ್ ಅವರು 1995ರಲ್ಲಿ ಅವರು ಮುಂಬೈ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದು 90ರ ದಶಕದಲ್ಲಿ ಅವರು ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಗಳಿಸಿದ್ದರು. ಮುಂಬೈ ಭೂಗಲೋಕದ 80ಕ್ಕೂ ಹೆಚ್ಚು ರೌಡಿಗಳನ್ನು ದಯಾನಾಯಕ್ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.





















