ಸುದ್ದಿಯಾದ, ಡಿಸಿಎಂ ಡಿಕೆಶಿ ತ್ಯಾಗದ ಮಾತು

ಬೆಂಗಳೂರು: ಗಾಂಧಿ ಕುಟುಂಬ ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಇಂದಿರಾ ಗಾಂಧಿ ಅವರ ಹೆಸರು ಈ ದೇಶದ ಪ್ರತಿಯೊಬ್ಬ ಬಡ ಜನತೆಯ ಉಸಿರು ಎಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯಸ್ಪರಣಿ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಡಿಸಿಎಂಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದಿರಾ ಗಾಂಧಿ ಈ ದೇಶದ ಐಕ್ಯತೆ ಸಮಗ್ರತೆ ಮತ್ತು ಶಾಂತಿಗೆ ದೊಡ್ಡ ಕೊಡುಗೆ ನೀಡಿ ಹುತಾತ್ಮರಾದವರು ಅವರು ಪ್ರಧಾನಿಗಳಾಗಿದ್ದಾಗ ಈ ದೇಶಕ್ಕೆ ನೀಡಿದ ಕಾರ್ಯಕ್ರಮಗಳು ಇಂದು ಜೀವಂತವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಇಂದಿರಾಗಾಂಧಿಯವರ ಹೆಸರು ಉಸಿರಿದ್ದಂತೆ ಗ್ರಾಮೀಣ ಭಾಗದ ಹಲವರ ಮನೆಗಳಲ್ಲಿ ಈಗಲೂ ಇಂದಿರಾಗಾಂಧಿಯವರ ಭಾವಚಿತ್ರ ಇಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಸೋನಿಯಾ ಗಾಂಧಿಯವರಿಗೆ ಪ್ರಧಾನಿಯಾಗುವ ಅವಕಾಶವಿತ್ತು. ದೇಶದಲ್ಲಿ ಅನೇಕರು ಈ ಬಗ್ಗೆ ಟೀಕೆ ಮಾಡಿದ್ದಾರೆ. ಯುಪಿಎ ಒಕ್ಕೂಟ ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಸ್ಥಾನ ಕೊಟ್ಟರು. ಆದರೆ ಸೋನಿಯಾ ಗಾಂಧಿ ಅಧಿಕಾರ ಮುಖ್ಯವಲ್ಲ ಎನ್ನುವ ಮೂಲಕ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಸ್ಥಾನವನ್ನು ಬಿಟ್ಟುಕೊಟ್ಟರು ಎಂದಿದ್ದಾರೆ.






















































