27.4 C
Udupi
Monday, May 4, 2026
spot_img
spot_img
HomeBlog'ಹಿಂದೂ ಅನ್ನೋದು ಅವಮಾನಕರ ಶಬ್ದ': ವಿವಾದಾತ್ಮಕ ಹೇಳಿಕೆ ನೀಡಿದ ಚಿಂತಕ ಕೆ.ಎಸ್ ಭಗವಾನ್

‘ಹಿಂದೂ ಅನ್ನೋದು ಅವಮಾನಕರ ಶಬ್ದ’: ವಿವಾದಾತ್ಮಕ ಹೇಳಿಕೆ ನೀಡಿದ ಚಿಂತಕ ಕೆ.ಎಸ್ ಭಗವಾನ್

ರಾಯಚೂರು: ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದು ಅದೇನಂದರೆ ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಹೇಳಿಕೆ ನೀಡಿದ್ದಾರೆ.

ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನ ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ.

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ. ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನ ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನ ವಾಪಸ್ ತರಬಾರದು. ಮನುಸ್ಮೃತಿಯನ್ನ ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನ ಪರ ಹೋರಾಡಬೇಕು ಮನುಸ್ಮೃತಿಯನ್ನ ತಿರಸ್ಕರಿಸಬೇಕು ಎಂದು ಅವರು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page