
ಇಂದು ಬೆಳಿಗ್ಗೆ ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.
60 ವರ್ಷ ವಯಸ್ಸಿನ ಯಶವಂತ ಸರದೇಶಪಾಂಡೆ ಅವರಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತ ಉಂಟಾಗಿದ್ದು ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು ಅವರ ಸಾವಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ಯಶವಂತ ಅವರು ನಾಟಕಗಳನ್ನು ನಿರ್ದೇಶಿಸಿ, ಅವುಗಳಲ್ಲಿ ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಮುಖ್ಯವಾಗಿ ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದು ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅಪಾರ ಅಭಿಮಾನಿಗಳನ್ನು ಹೊಂದಿರುವ ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ‘ಆಲ್ ದಿ ಬೆಸ್ಟ್’ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.






















































