
ಹೆಬ್ರಿ : ಜೂ. 24, ಬೈಕ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಪಳ್ಳಿ ಗ್ರಾಮದ ವಿಶ್ವನಾಥ್ ಎಂಬವರು ಮೃತಪಟ್ಟ ಘಟನೆ ಸೋಮವಾರ ಸಂಜೆ 4:30 ರ ವೇಳೆ ವರಂಗ ಗ್ರಾಮದ ಕೆಲಕಿಲ ಸೇತುವೆಯ ಬಳಿ ನಡೆದಿದೆ.
ಹೆಬ್ರಿಯಿಂದ ಅಜೆಕಾರ್ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು ಬೈಕ್ ಸವಾರರಿಗೆ ಡಿಕ್ಕಿಯಾಗಿದ್ದ ಪರಿಣಾಮ ಸವಾರರಿಬ್ಬರು ಗಾಯವಾಗಿದ್ದು. ತೀವ್ರ ಸ್ವರೂಪದ ಗಾಯವಾಗಿದ್ದ ವಿಶ್ವನಾಥ್ ಎಂಬವರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.