30.5 C
Udupi
Friday, May 16, 2025
spot_img
spot_img
HomeBlogಹೆಬ್ರಿ : ಗ್ರಾಮಸ್ಥರ ನಿದ್ದೆಗೆಡಿಸಿದ ಒಂಟಿ ಸಲಗ ಹಾವಳಿ

ಹೆಬ್ರಿ : ಗ್ರಾಮಸ್ಥರ ನಿದ್ದೆಗೆಡಿಸಿದ ಒಂಟಿ ಸಲಗ ಹಾವಳಿ

ಕಾರ್ಕಳ: ದ.ಕನ್ನಡ ಜಿಲ್ಲೆಗೆ ಸೀಮಿತವಾಗಿದ್ದ ಆನೆ ಹಾವಳಿ ಈಗ ಉಡುಪಿ ಜಿಲ್ಲೆಯಲ್ಲಿಯು ಸದ್ದಿಲ್ಲದೆ ಆರಂಭವಾಗಿದೆ. ಹೆಬ್ರಿ ಸೋಮೇಶ್ವರ ನಾಡ್ಪಾಲು ಕೂಡ್ಲು ಆಗುಂಬೆ ಮಾರ್ಗವಾಗಿ ಸಾಗುವವರೆ ಹುಷಾರ್ . ಯಾಕೆಂದರೆ ಒಂಟಿ ಸಲಗ ಹೆಬ್ರಿ ಆಗುಂಬೆ ವ್ಯಾಪ್ತಿ ಯ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಿಗೆ ಹಾಗೂ ರಸ್ತೆಯಲ್ಲಿ ಸಾಗುವ ಜನರ ನಿದ್ದೆಗೆಡಿಸಿದೆ.

ಕಳೆದ ನಾಲ್ಕು ದಿನಗಳಿಂದ ಹೆಬ್ರಿ ತಾಲೂಕಿನ ನಾಡ್ಪಾಲು ನೆಲ್ಲಿಕಟ್ಟೆ ಮೀನಾ ಪೂಜಾರ್ತಿ ಎಂಬವರ ಮನೆ ಬಳಿ ಆನೆ ರಾತ್ರಿ ವೇಳೆಯಲ್ಲಿ ದಾಳಿ‌ಮಾಡುತಿದ್ದು ಮರದಲ್ಲಿದ್ದ ಹಲಸು ಹಾಗೂ ತೆಂಗು ಬಾಳೆ ,ನಾಶಮಾಡಿದೆ.. ಆದರೆ ಮುಂಜಾವಿನಲ್ಲಿ‌ ಆನೆ ಕಾಡಿಗೆ ಹೋಗಿ ತಪ್ಪಿಸಿಕೊಳ್ಳುತ್ತಿದೆ.

ಯಾವುದೇ ಜೀವ ಹಾನಿ ಸಂಭವಿಸಿಲ್ಲ, ಕಳೆದ ಬಾರಿ ಕಬ್ಬಿನಾಲೆ ಮುಂಡಾಣಿ ತಿಂಗಾಳೆ , ಬಳಿ ಇದೆ ಆನೆಯು ಅಲ್ಪ‌ಮಟ್ಟಿಗೆ ಕೃಷಿ ಯನ್ನು ಹಾನಿ ಗೊಳಿಸಿತ್ತು. ಅರಣ್ಯ ಇಲಾಖೆಯ ಮಾಹಿತಿ ಪ್ರಕಾರ ಈ ಒಂಟಿ ಸಲಗವು ಸುಳ್ಯದ ಕುಕ್ಕೆ ಸುಬ್ರಹ್ಮಣ್ಯ ದಿಂದ ಬೆಳ್ತಂಗಡಿ ಮೂಲಕ ನಾರಾವಿ , ಮಾಳ ಘಾಟ್ ಮೂಲಕ ವಾಲಿಕುಂಜ ಬೆಟ್ಟದ ಮೇಲಿನ ಕಬ್ಬಿನಾಲೆಯ ತಿಂಗಳಮಕ್ಕಿ , ತೆಂಗುಮಾರ್, ಕಿಗ್ಗ , ಬರ್ಕಣ ಮಲ್ಲಂದೂರು , ಆಗುಂಬೆ ಯ ಮೂಲಕ ನಗರ ಹೊಸನಗರ ವರೆಗೆ ಸಂಚರಿಸುತ್ತದೆ. ಆದರೆ ಯಾವುದೇ ಪ್ರಾಣ ಹಾನಿ ಮಾಡಿಲ್ಲ.

ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೆಬ್ರಿ ಸಮೀಪದ ಸಂತೆಕಟ್ಟೆ ಎಂಬಲ್ಲಿ ಒಂಟಿ‌ಸಲಗವು ಕೋಲಿನ‌ಮೂಲಕ ಹೊಡೆಯಲು ಹೋದ ಓರ್ವ ವ್ಯಕ್ತಿಯನ್ನು ಸೊಂಡಿಲಿನ ಮ‌ೂಲಕ ನೆಲಕ್ಕೆ ಬಿಸಾಡಿತ್ತು.

🔴ಪ್ರವಾಸಿಗರೆ ಹುಷಾರು : ಕಬ್ಬಿನಾಲೆ ಫಾಲ್ಸ್ ಅಗುಂಬೆ ಸೂರ್ಯಾಸ್ತ ವೀಕ್ಷಣಾ ಪ್ರದೇಶದ, ಮಲ್ಲಂದೂರು ಬರ್ಕಣ ಫಾಲ್ಸ್ ಗಳಿಗೆ ಬರುವ ಪ್ರವಾಸಿಗರೆ ಹುಷಾರಾಗಿರಿ . ಒಂಟಿ‌ಸಲಗವು ಅಲ್ಲಲ್ಲಿ ಕಾಣಿಸುತಿದೆ. ಅರಣ್ಯ ಇಲಾಖೆಯ ಮಾಹಿತಿಯನ್ನು ಆಧರಿಸಿ ಸಂಚರಿಸುವುದು ಒಳಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page