
ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮಾಳ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ, ಸಹಕಾರ ಇಲಾಖೆ, ಉಡುಪಿ ಜಿಲ್ಲೆ, ಶ್ರೀ ಮಹಾ ವಿಷ್ಣುಮೂರ್ತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಳೆಪಳ್ಳಿ ಮಾಳ ಇದರ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷ 2025ರ ಆಚರಣೆಯ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್” ಎನ್ನುವ ಧ್ಯೇಯ ವಾಕ್ಯದೊಂದಿಗೆ ಗಿಡ ನೆಡುವ ಕಾರ್ಯಕ್ರಮವು ದಿನಾಂಕ 25. 06.2025 ರಂದು ಶ್ರೀ ಮಹಾವಿಷ್ಣುಮೂರ್ತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಜರಗಿತು.
ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಶೆಟ್ಟಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಉಪಾಧ್ಯಕ್ಷರು ಹಾಗೂ ಪಿ ಎಲ್ ಡಿ ಬ್ಯಾಂಕ್ ಕಾರ್ಕಳ ಇದರ ಅಧ್ಯಕ್ಷರಾದ ಅಶೋಕ್ ಕುಮಾರ್ ಬಲ್ಲಾಳ್, ಸಹಕಾರಿ ಯೂನಿಯನ್ ಉಡುಪಿ ಇದರ ನಿರ್ದೇಶಕರಾದ ಅನಿಲ್ ಎಸ್. ಪೂಜಾರಿ, ಸಂಘದ ಉಪಾಧ್ಯಕ್ಷರಾದ ನಾಗೇಶ್ ಭಂಡಾರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹೆಚ್. ವೆಂಕಟೇಶ್ ಗೋರೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಿನೇಶ ಶೆಟ್ಟಿ, ಪ್ರಧಾನ ಅರ್ಚಕರಾದ ಶ್ರೀ ಶ್ರೀಶ ಭಟ್, ಟಿ. ಎ. ಪಿ. ಸಿ ಎಂ ಎಸ್ ಕಾರ್ಕಳ ಇದರ ನಿರ್ದೇಶಕರಾದ ಜಯರಾಮ ಬಂಗೇರ ವೇದಿಕೆಯಲ್ಲಿದ್ದರು.
ಸಂಘದ ನಿರ್ದೇಶಕರುಗಳಾದ ಅಕ್ಷಯ ಕುಮಾರ್, ನಂದುಗೋಪನ್ ಕೆ.ಆರ್, ಶ್ರೀಮತಿ ಗೀತಾ ಎಸ್. ಪಾಟ್ಕರ್, ಶ್ರೀಮತಿ ಉಷಾ ಶೆಟ್ಟಿ , ರಾಜೇಶ್ವರ ನಾಯ್ಕ, ಅಣ್ಣಿ ಪರವ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಎಂ. ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿ ಕಿರಣ್ ಪೂಜಾರಿ ಧನ್ಯವಾದವಿತ್ತರು.
ಶಾಖಾ ವ್ಯವಸ್ಥಾಪಕರಾದ ಶ್ರೀ ಹರೀಶ್ ಕೆ., ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಿರಾನಗರ, ಮಾಳ ಇದರ ಮುಖ್ಯೋಪಾಧ್ಯಾಯನಿ ಶ್ರೀಮತಿ ಅರುಣ ಮತ್ತು ಶಾಲಾ ಮಕ್ಕಳು, ದೇವಸ್ಥಾನದ ಸಮಿತಿಯ ಸದಸ್ಯರು, ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.






















































