
ಸಕಲೇಶಪುರ: ರಾಜ್ಯದ ಹಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿರುವ ಕಾರಣ ಅಲ್ಲವೇ ಭೂಕುಸಿತ ಉಂಟಾಗಿದ್ದು, ಕರಾವಳಿ ಭಾಗದಿಂದ ಬೆಂಗಳೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಡಿ ಘಾಟಿ ರಸ್ತೆಯಲ್ಲಿ ಭಾರಿ ಮಳೆಯ ಕಾರಣ ಜಿಲ್ಲಾಡಳಿತ ವಾಹನ ಸಂಚಾರವನ್ನು ನಿಷೇಧಿಸಿದ್ದು ಇದೀಗ ಈ ಆದೇಶವನ್ನು ವಾಪಾಸ್ ಪಡೆದಿದೆ.
ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು ಬೆಳಿಗ್ಗೆ 6ರಿಂದ ಸಂಜೆ 6 ರ ತನಕ ಮಾತ್ರ ಶಿರಾಡಿ ಮಾರ್ಗವಾಗಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾತ್ರಿಯ ವೇಳೆಯಲ್ಲಿ ಈ ಮಾರ್ಗದ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.








