
ತಿರುಪತಿ: ಇನ್ನು ಮುಂದೆ ತಿರುಮಲ ತಿರುಪತಿ ದೇವಸ್ಥಾನಗಳಲ್ಲಿ ಭಕ್ತರಿಗೆ ದರ್ಶನ, ಸೇವೆ, ಟಿಕೆಟ್ ಬುಕ್ಕಿಂಗ್ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಆಧಾರ್ ಧೃಡೀಕರಣ ಹಾಗೂ ಇ-ಕೆವೈಸಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಶನಿವಾರ ದತ್ತಿ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಈ ಮೂಲಕ ಅಕ್ರಮವಾಗಿ ಟಿಕೆಟ್ ಗಿಟ್ಟಿಸಲು ಅನ್ಯರ ಗುರುತನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಬ್ರೇಕ್ ಹಾಕಿದೆ.
ಕಳೆದ ವರ್ಷ ಜುಲೈನಲ್ಲಿ ಟಿಟಿಡಿ ಆಧಾರ್ ಧೃಡೀಕರಣ ಅಳವಡಿಕೆಗೆ ಅನುಮತಿ ಕೋರಿ ದತ್ತಿ ಇಲಾಖೆಗೆ ಪತ್ರ ಬರೆದಿದ್ದು ಇದಕ್ಕೆ ಕೇಂದ್ರ ಸರ್ಕಾರ ಆಗಸ್ಟ್ನಲ್ಲಿ ಒಪ್ಪಿಗೆ ಸೂಚಿಸಿತ್ತು. ಇದೀಗ ಈ ವ್ಯವಸ್ಥೆ ಜಾರಿಗೆ ಬಂದಿದೆ.



















