27.7 C
Udupi
Thursday, July 31, 2025
spot_img
spot_img
HomeBlogಎಸ್.ಎನ್.ವಿ ಪದವಿಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳ

ಎಸ್.ಎನ್.ವಿ ಪದವಿಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳ

2024-25ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ದಿನಾಂಕ 26.07.2025 ಶನಿವಾರ ದಂದು ಕಾರ್ಕಳದ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆಗೈದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಎನ್. ವಿ ಶಿಕ್ಷಣ ಸಂಸ್ಥೆಗಳ ಸಂಚಾಲಕರು ಹಾಗೂ ಕಾರ್ಕಳದ ಹಿರಿಯ ನ್ಯಾಯವಾದಿಗಳಾದ ಶ್ರೀ ಎಂ. ಕೆ. ವಿಜಯ ಕುಮಾರ್ ಇವರು ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿ ಶುಭವನ್ನು ಹಾರೈಸಿದರು.

ಕಾರ್ಯಕ್ರಮದಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಧನ್ಯ ,ತ್ರಿಶಾ ಆರ್. ಶೆಟ್ಟಿ, ಸಾನಿಧ್ಯ ಆರ್. ಜೈನ್ ಹಾಗೂ ಶಾಶ್ವತಿ ಇವರುಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಪ್ರಸ್ತುತ ವರ್ಷದ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.

ವೇದಿಕೆಯಲ್ಲಿ ಎಸ್. ಎನ್. ವಿ ಪ್ರೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿಯರುಗಳಾದ ಶ್ರೀಮತಿ ಉಷಾ ಪಡಿವಾಳ್ ಹಾಗೂ ಶ್ರೀಮತಿ ಶರ್ಮಿಳಾ ಹೆಗ್ಡೆ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿದರು, ಆಂಗ್ಲ ಭಾಷಾ ಉಪನ್ಯಾಸಕ ಶ್ರೀ ಅನಿಲ್ ಕುಮಾರ್ ಸಾಧಕರ ಪರಿಚಯ ವಾಚಿಸಿದರು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ವೀರೇಂದ್ರ ಜೈನ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಪ್ರೀತಾ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page