
ಉಡುಪಿ: ತುಳುನಾಡಿನ ಬಹು ಜನಪ್ರಿಯ ಕ್ರೀಡೆಯಾದ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಅದೇನೆಂದರೆ ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆಯೂ ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರೂ ಸಿಕ್ಕಿರಲಿಲ್ಲ. ಹೀಗಾಗಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದು ಸ್ವತಃ ಸ್ಪೀಕರ್ ಯುಟಿ ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು. ಯುಟಿ ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಮಾಡಿದೆ.
ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್ಕೆ ಪಾಟೀಲ್ ಆದೇಶ ಹೊರಡಿಸಿದ್ದು 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ.