ಗಣೇಶನನ್ನು ಕೂಡ ಪೊಲೀಸ್ ಗಾಡಿಯಲ್ಲಿ ಕೂಡಿಹಾಕಿ ಕೊಂಡೊಯ್ಯಲಾಗಿದೆ : ಪ್ರಧಾನಿ ಮೋದಿ

ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಟೀಕೆ ವ್ಯಕ್ತಪಡಿಸಿದ್ದಾರೆ.
ಹರಿಯಾಣ ವಿಧಾನಸಭಾ ಚುನಾವಣೆ ವಿಚಾರವಾಗಿ ಕುರುಕ್ಷೇತ್ರದಲ್ಲಿ ಶನಿವಾರ ಸಂಜೆ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಕರ್ನಾಟಕ ಹಾಗೂ ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಪಶ್ಚಾತಾಪ ಪಡುತ್ತಿದ್ದಾರೆ. ಹರಿಯಾಣದಲ್ಲಿ ಬೆಂಬಲ ಬೆಲೆ ಕಾಯಿದೆಗೆ ಆಗ್ರಹಿಸಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ಎಷ್ಟು ಬೆಳೆಗಳಿಗೆ ಬೆಂಬಲ ಬೆಲೆ ನೀಡಿದೆ ಎಂದು ಪ್ರಶ್ನಿಸುವುದರ ಮೂಲಕ ಕರ್ನಾಟಕ ರಾಜ್ಯದಲ್ಲಿ ಗಣೇಶೋತ್ಸವ ಮೆರವಣಿಗೆಯ ವೇಳೆ ನಡೆದ ಗಲಭೆಯ ಬಗ್ಗೆ ತುಷ್ಟಿಕರಣವೇ ಕಾಂಗ್ರೆಸ್ಸಿನ ಮೊದಲ ಆದ್ಯತೆ. ಇಲ್ಲಿ ಗಣೇಶನ ಮೂರ್ತಿಯನ್ನು ಕೂಡ ಪೊಲೀಸ್ ಗಾಡಿಯ ಒಳಗೆ ಕೂಡಿ ಹಾಕಿ ಕೊಂಡೊಯ್ಯಲಾಗುತ್ತಿದೆ . ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಹಣದುಬ್ಬರದಿಂದ ಜನ ರೋಸಿ ಹೋಗಿದ್ದಾರೆ ಎಂದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.













