ರಾಜಕೀಯ ದುರ್ಬುದ್ಧಿಯ ವಿರುದ್ಧ ಅಷ್ಟಮಂಗಳ ಪ್ರಶ್ನೆ ಹಾಕಿ…! ಕಾರ್ಕಳ ಬಿಜೆಪಿ ಮಂಡಲ ಆಕ್ರೋಶ

ಕಾರ್ಕಳ-ಫೆ 20 : ಕಾರ್ಕಳದ ಅಸ್ಮಿತೆಯಾಗಬೇಕಿದ್ದ ಪರಶುರಾಮ ಥೀಂ ಪಾರ್ಕ್ ಈ ಸ್ಥಿತಿ ತಲುಪುವುದಕ್ಕೆ ನೇರ ಹೊಣೆಗಾರರಾದ ಕಾಂಗ್ರೆಸ್
ಮುಖಂಡ ಉದಯ ಕುಮಾರ್ ಶೆಟ್ಟಿಯವರೇ, ನಿಮ್ಮ ದುರ್ಬುದ್ಧಿ ಯಾವಾಗ ಕಡಿಮೆಯಾಗಿತ್ತದೆ ಎಂದು ಮೊದಲು ಅಷ್ಟಮಂಗಲ ಪ್ರಶ್ನೆ ಕೇಳಿ ಎಂದು ಕಾರ್ಕಳ ಬಿಜೆಪಿ ಮಂಡಲ ಆಕ್ರೋಶ ವ್ಯಕ್ತಪಡಿಸಿದೆ.
ಒಂದು ಜನಪ್ರಿಯ ಯೋಜನೆಯನ್ನು ಹಳ್ಳ ಹಿಡಿಸುವುದಕ್ಕಾಗಿ ನೀವು ಕಳೆದ ಎರಡು ವರ್ಷಗಳಿಂದ ನಡೆಸುತ್ತಿದ್ದ ಷಡ್ಯಂತ್ರದ ವಿರುದ್ಧ ಈಗ
ಕಾರ್ಕಳದ ಜನ ಹಾದಿಬೀದಿಯಲ್ಲಿ ಉಗಿಯುತ್ತಿದ್ದಾರೆ. ಇದರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಈಗ ಅಷ್ಟಮಂಗಲದ ನಾಟಕ ಪ್ರಾರಂಭಿಸಿದ್ದಾರೆ.
ಥೀಂ ಪಾರ್ಕ್ ನ್ನು ಕಟ್ಟಿದ್ದು ಅಪ್ಪಟ ಪ್ರವಾಸೋದ್ಯಮ ಉದ್ದೇಶದಿಂದ. ಭಜನಾ ಮಂದಿರವನ್ನು ಬಿಟ್ಟರೆ ಯಾವುದೇ ಧಾರ್ಮಿಕ
ಚಟುವಟಿಕೆಗಳ ಉದ್ದೇಶದಿಂದ ಮಾಡಿದ್ದಲ್ಲ. ಆದರೆ ಈಗ ಅಷ್ಟಮಂಗಲದ ವಿಚಾರ ಪ್ರಸ್ತಾಪಿಸಿ ಕಾಮಗಾರಿಗೆ ಇನ್ನಷ್ಟು ಅಡ್ಡಿ ಮಾಡುವುದಷ್ಟೇ
ನಿಮ್ಮ ಉದ್ದೇಶವೆಂದು ತೋರುತ್ತಿದೆ.
ಉದಯ ಕುಮಾರ್ ಶೆಟ್ರೆ, ಪರಶುರಾಮ ಥೀಂ ಪಾರ್ಕ್ ನೀವು ನಡೆಸುವ ಕಳಪೆ ರಸ್ತೆ ಕಾಮಗಾರಿಯಂತೆ ಅಲ್ಲ. ಮೊದಲು ಥೀಂ ಪಾರ್ಕ್
ಎಂದರೆ ಏನು ಎಂಬುದನ್ನು ಅರ್ಥಮಾಡಿಕೊಳ್ಳಿ….
ಎರಡು ವರ್ಷಗಳಿಂದ ಯೋಜನೆ ನಿಲ್ಲಿಸುವುದಕ್ಕೆ ಮಾಡಿದ ಕಪಿಚೇಷ್ಠೆಗಳು ಸಾಕು.ಮೂರ್ತಿ ಪೈಬರ್ನದ್ದು ಎಂದು ನೀವು ಮಾಡಿದ
ಮೊದಲ ಆರೋಪವೇ ಈಗ ನ್ಯಾಯಾಲಯದಲ್ಲಿ ಬಿದ್ದು ಹೋಗಿದೆ. ನಿರ್ಮಿತಿ ಕೇಂದ್ರದ ಅಧಿಕಾರಗಳನ್ನು ರಾಜಕೀಯ ಒತ್ತಡದ ಮೂಲಕ
ಅಮಾನತು ಮಾಡಿಸಿದ ನೀವು, ಮೂರ್ತಿಯನ್ನು ಪೊಲೀಸ್ ಸ್ಟೇಷನ್ನ ಗೋದಾಮುನಲ್ಲಿ ಧೂಳು ಹಿಡಿಯುವ ಹಾಗೆ ಮಾಡಿದಿರಿ. ಶಿಲ್ಪಿ ಕೃಷ್ಣ
ನಾಯಕ್ ಮೇಲೆ ನಡೆಸಿದ ದೌರ್ಜನ್ಯವನ್ನು ಕಾರ್ಕಳದ ಜನ ಮರೆತಿಲ್ಲ. ಥೀಂ ಪಾರ್ಕ್ ಸಂಪರ್ಕಿಸುವ ರಸ್ತೆಯ ಮೇಲೆ ಮಣ್ಣು ಹಾಕಿ ಸಂಚಾರ
ಪ್ರತಿಬಂಧಿಸಿದಾಗ ನಿಮಗೇ ಅಷ್ಟಮಂಗಲ ಕೇಳಬೇಕೆಂದೆನಿಸಿಲ್ಲ. ಇಂಥ ರಾಜಕೀಯ ದುರ್ಬುದ್ಧಿಯ ವಿರುದ್ಧ ಮೊದಲು ಅಷ್ಟಮಂಗಲ ಪ್ರಶ್ನೆ ಮಾಡಿ,
ನಂತರ ಉಳಿದ ವಿಚಾರದ ಬಗ್ಗೆ ಮಾತನಾಡೋಣ ಎಂದು ಕಾರ್ಕಳ ಬಿಜೆಪಿ ಮಂಡಲದ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಮತ್ತು ಕಾರ್ಯದರ್ಶಿ ಸುಮಿತ್ ಶೆಟ್ಟಿ ಕೌಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














