
ಫೆ. 28 ರಾತ್ರಿ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಬಳಿ ಮಾರುತಿ ಇಕೋ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಸಂಭವಿಸಿದೆ.
ಯುವಕರಿಬ್ಬರು ಕಾರ್ಕಳ ಕಡೆಯಿಂದ ಬೈಲೂರು ಕಡೆಗೆ ಹೋಗುತ್ತಿದ್ದಾಗ ಅಯ್ಯಪ್ಪನಗರ ಬಳಿ ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿದು ಘಟನೆಯಲ್ಲಿ
ಎರ್ಲಪಾಡಿಯ ಶಿವಾನಂದ (18) ಹಾಗು ರಕ್ಷಿತ್(19) ಎಂಬ ಯುವಕರಿಬ್ಬರು ಮೃತಪಟ್ಟಿದಾರೆ.
ಕಾರ್ಕಳ ನಗರ ಠಾಣಾಯಲ್ಲಿ ಪ್ರಕರಣ
ದಾಖಲಾಗಿದೆ.






