ಕಾರ್ಕಳ: ವಿಜೇತ ವಿಶೇಷ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬೋರ್ಕಟ್ಟೆ ಶ್ರೀಮತಿ ಗಂಗಮ್ಮ ಮೆಮೋರಿಯಲ್ ಟ್ರಸ್ಟ್ ರಿ. ಅಧ್ಯಕ್ಷರು ಹಾಗೂ ಪ್ರಕಾಶ್ ಜ್ಯುವೆಲ್ಲರಿ ಮಾಲ್ಹಕರಾದ ಶ್ರೀ ಪ್ರಕಾಶ್ ಆಚಾರ್ಯ ಇವರು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ,ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶಾಲೆಗೆ ಸ್ಲಯ್ಡಿಂಗ್ ಕಿಟಕಿ ಗಳನ್ನು ಹಸ್ತಾಂತರಿಸಿ ಸಹಕರಿಸಿದ ಶ್ರೀ ರಾಮಕೃಷ್ಣ ನಾಯಕ್ ಕಡ್ತಲ ಉದ್ಯಮಿಗಳು, ಜನಪ್ರಿಯ ರೈಸ್ ಮಿಲ್ ಮಾಲಕರಾದ ಶ್ರೀ ಮಂಜುನಾಥ್, ವಿಜೇತ ವಿಶೇಷ ಶಾಲಾ ಅಧ್ಯಕ್ಷರು ಶ್ರೀ ರತ್ನಾಕರ್ ಅಮೀನ್, ದುರ್ಗಾ ವಿದ್ಯಾ ಸಂಘ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಕೆ ರಾಧಾಕೃಷ್ಣ ಶೆಟ್ಟಿ, ಬ್ಯಾಂಕ್ ಸಿಬ್ಬಂದಿ ಶ್ರೀ ಶಿವಾನಂದ ನಾಯಕ್, ಸಂಸ್ಥಾಪಕಿ ಡಾ. ಕಾಂತಿ ಹರೀಶ್, ಮ್ಯಾನೇಜಿoಗ್ ಟ್ರಸ್ಟಿ ಹರೀಶ್, ಟ್ರಸ್ಟಿ ಕಿರಣ್ ಶೆಟ್ಟಿ, ಶಾಲಾ ಹಿತೈಷಿಗಳು ಲಕ್ಷ್ಮೀ ಪುತ್ರನ್, ಉಪಸ್ಥಿತರಿದ್ದರು. ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಹಾಗೂ ಮಕ್ಕಳ ಪೋಷಕರು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು.
*ಕುಕ್ಕುಂದೂರು ಗ್ರಾಮ ಪಂಚಾಯತ್, ಕಾರ್ಕಳ ಟೀಮ್ ವರ್ಲ್ಡ್ ರೈಡಿಂಗ್, ಶ್ರೀ ಮಂಜುನಾಥ್ ಇವರ ವತಿಯಿಂದ ಸಿಹಿತಿಂಡಿ ವಿತರಿಸಿದರು.
ಘಣ್ ಶ್ಯಾಮ್ ಅತ್ತಾವರ್ ಇವರಿಂದ ಉಪಹಾರ ವ್ಯವಸ್ಥೆ, ಶ್ರೀ ಗಿರೀಶ್ & ಶ್ರೀಮತಿ ಪೂಜಾ ದಂಪತಿಗಳು, ಪುರಸಬಾ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಶುಭದ ರಾವ್ ಹಾಗೂ ಶ್ರೀ ಕ್ಷೇತ್ರ ಪೆರಾರ ಭಜನಾ ಮಂಡಳಿ ಇವರು ವಿಶೇಷ ಭೋಜನದ ವ್ಯವಸ್ಥೆಗಾಗಿ ಸಹಕಾರ ನೀಡಿದರು.
ವಿಶೇಷ ಶಿಕ್ಷಕಿ ಶ್ರೀಮತಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ ಡಾ. ಕಾಂತಿ ಹರೀಶ್ ಸ್ವಾಗತಿಸಿ, ಸಿಬ್ಬಂದಿ ಹಾಗೂ ಮಕ್ಕಳು ಪ್ರಾರ್ಥನೆಯನ್ನು ನೆರವೇರಿಸಿ, ಶ್ರೀಮತಿ ಶ್ವೇತಾ ವಂದಿಸಿದರು.