27.9 C
Udupi
Thursday, January 22, 2026
spot_img
spot_img
HomeBlogಕಾರ್ಕಳ : ಬಾವಿಗೆ ಬಿದ್ದ ಚಿರತೆ ;ಸಾವು

ಕಾರ್ಕಳ : ಬಾವಿಗೆ ಬಿದ್ದ ಚಿರತೆ ;ಸಾವು

ಕಾರ್ಕಳ: ಬೋಳ ಗ್ರಾಮದ ಮಲಕ್ಯರ್ ಕಡ್ಕನ್‌ ನಾರಾಯಣ್ ಶೆಟ್ಟಿ ಅವರ ತೋಟದ ಬಾವಿಯಲ್ಲಿ ಸುಮಾರು 3 ವರ್ಷದ ಗಂಡು ಚಿರತೆಯೊಂದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಜ.20ರಂದು ನಡೆದಿದೆ.

ಮಂಗಳವಾರ ಬೆಳಿಗ್ಗೆ ಮನೆಯವರು ನೀರು ತೆಗೆಯಲು ಬಾವಿಯ ಬಳಿ ತೆರಳಿದಾಗ ಚಿರತೆಯ ಮೃತದೇಹ ಕಂಡು ಬಂದಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಮಾಹಿತಿ ಪಡೆದ ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಮತ್ತವರ ಸಿಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ನಾಯಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಚಿರತೆ ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಚಿರತೆಯು 2-3 ದಿನಗಳ ಹಿಂದೆಯೇ ಬಾವಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ಅಂದಾಜಿಸಿದೆ.

ಈ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರ ಆತಂಕದ ಹಿನ್ನೆಲೆಯಲ್ಲಿ ಈ ಹಿಂದೆ ಹಲವು ಬಾರಿ ಬೋನು ಅಳವಡಿಸಿದ್ದರೂ ಚಿರತೆ ಸಿಕ್ಕಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಅರಣ್ಯಾಧಿಕಾರಿ ಹುಕ್ರಪ್ಪ ಗೌಡ ಅವರ ನೇತೃತ್ವದ ತಂಡವು ಮೃತದೇಹವನ್ನು ಮೇಲಕ್ಕೆತ್ತಿ, ವೈದ್ಯಾಧಿಕಾರಿಗಳಿಂದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಿಯಮಾನುಸಾರ ಅಂತ್ಯಕ್ರಿಯೆ ನಡೆಸಲಾಯಿತು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page