
ಅಂತರಾಷ್ಟ್ರೀಯ ಯೋಗ ದಿನಾಚರಣೆಕಾರ್ಕಳ: ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಎನ್. ಸಿ. ಸಿ., ರೋಟರಾಕ್ಟ್ ಕ್ಲಬ್ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಆಚರಿಸಲಾಯಿತು.
ತರಬೇತುದಾರರಾಗಿ ಆಗಮಿಸಿದ್ದ ಕು. ಸ್ವಸ್ತಿ ಶೆಟ್ಟಿ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿ ಹಂತದಲ್ಲಿಯೇ ಮಾನಸಿಕ ಮತ್ತು ದೈಹಿಕ ದೃಢತೆಯನ್ನುಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇಂದಿನ ದಿನಗಳಲ್ಲಿದೆ. ಕಲಿಕೆಯ ಜೊತೆಗೆ ಯೋಗಕ್ಕೂ ಹೆಚ್ಚಿನ ಗಮನ ಕೊಡಬೇಕು ಎಂದರು. ಬಳಿಕ ಕಾಲೇಜಿನಎಲ್ಲ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಭಂಗಿಗಳ ಕುರಿತ ತಿಳುವಳಿಕೆ ನೀಡಿದರು.ರಾ. ಸೇ. ಯೋ. ಅಧಿಕಾರಿಯಾದ ಶಂಕರ್ ಕುಡ್ವ ಸ್ವಾಗತಿಸಿ, ಎನ್.ಸಿ.ಸಿ. ಅಧಿಕಾರಿಯಾದ ಕ್ಯಾ. ಶ್ರೀಮೂರ್ತಿ ಧನ್ಯವಾದ ಸಮರ್ಪಿಸಿದರು.





















































































