
ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಸುಮಾರು 27 ಸಾವಿರ ರೈತರಿಂದ ಒಟ್ಟು 3.15 ಲಕ್ಷ ಕ್ವಿಂಟಲ್ ಉಂಡೆ ಕೊಬ್ಬರಿಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿದ್ದು ಇದರ ಬಾಕಿ ಹಣ 346.50 ಕೋಟಿ ರೂ.ಗಳನ್ನು 24,600 ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ರೈತರಿಗೆ ಒಟ್ಟು 378 ಕೋಟಿ ರೂ. ಹಣ ಪಾವತಿಸಬೇಕಿತ್ತು. ಆಗಸ್ಟ್ 5ರ ವರೆಗೆ 346.50 ಕೋಟಿ ರೂ. ಜಮೆ ಮಾಡಿಸಲಾಗಿದೆ. ಇದರಿಂದ ಶೇ.92ರಷ್ಟು ರೈತರಿಗೆ ಹಣ ಪಾವತಿಸಿದಂತಾಗಿದೆ. ಬಾಕಿ ಇರುವ 2,438 ರೈತರಿಗೆ 31.65 ಕೋಟಿ ರೂ.ಗಳನ್ನು ಪಾವತಿಸಬೇಕಿದ್ದು ಅದನ್ನು ಆದಷ್ಟು ಬೇಗ ಪಾವತಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.













