
ಬೆಂಗಳೂರು: ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು ಈ ಕುರಿತು ಎಚ್ಚೆತ್ತುಕೊಂಡ ಕರ್ನಾಟಕ ಗೃಹ ಇಲಾಖೆ ಇಂದು ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಮ್ಸ್ಟೇಗಳಲ್ಲಿ ಭದ್ರತೆ ಮತ್ತು ಸುರಕ್ಷತೆ ಕುರಿತು ಸುತ್ತೋಲೆ ಹೊರಡಿಸಿದೆ.
ಹೋಮ್ಸ್ಟೇಗಳು ಪ್ರವಾಸಿಗರ ಭದ್ರತೆ, ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಹಾಗೇ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕೊರೆದೊಯ್ಯುವಾಗ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆಯುವುದು ಕಡ್ಡಾಯ. ಪೊಲೀಸ್ ಅಥವಾ ಅರಣ್ಯ ಇಲಾಖೆಯಿಂದ ಪೂರ್ವಾನುಮತಿ ಪಡೆಯದೆ ಪ್ರವಾಸಿಗರನ್ನು ಕರೆದೊಯ್ದು ದುರ್ಘಟನೆ ಸಂಭವಿಸಿದರೆ ರೆಸಾರ್ಟ್, ಹೋಂಸ್ಟೇಗಳ ಮಾಲೀಕರೇ ಜವಾಬ್ದಾರರು ಎಂದು ಖಡಕ್ ಆಗಿ ತಿಳಿಸಲಾಗಿದೆ.
ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ತೊಂದರೆಯಾದರೆ ರೆಸಾರ್ಟ್, ಹೋಮ್ ಸ್ಟೇ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಲಿದ್ದು, ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆಂದು ರೆಸಾರ್ಟ್ ಮತ್ತು ಹೋಮ್ಸ್ಟೇಗಳಿಗೆ ರಾಜ್ಯ ಗೃಹ ಇಲಾಖೆ ಸುತ್ತೋಲೆ ಮೂಲಕ ಎಚ್ಚರಿಕೆ ನೀಡಿದೆ.