
ಕೋಲಾರ ಸಹಕಾರ ನಗರದ ಬಳಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಡಿ ಕಾರಿನಲ್ಲಿ ರೇವಾ ಯೂನಿವರ್ಸಿಟಿಯ 4 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪವಾಡ ಸದೃಷ ಪಾರಾಗಿದ್ದಾನೆ.
ಆಡಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಅಪಘಾತ ಕಾರ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟದ್ದಾರೆ ಎಂದು ತಿಳಿದುಬಂದಿದೆ.ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ಪಟ್ಟವರು. ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ,ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.












