26.2 C
Udupi
Friday, April 24, 2026
spot_img
spot_img
HomeBlogಕ್ರೈಸ್ಟ್ ಕಿಂಗ್: ಪದವಿಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

ಕ್ರೈಸ್ಟ್ ಕಿಂಗ್: ಪದವಿಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ

”ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯ”-ವಿನಾಯಕ್ ನಾಯ್ಕ್

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕರ್ನಾಟಕ ಸರಕಾರ ಹಾಗೂ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾಟವು ಕಾರ್ಕಳದ ಗಾಂಧೀ ಮೈದಾನದಲ್ಲಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಬಾರಿಯ ರಾಜ್ಯಮಟ್ಟದ ಉತ್ತಮ ಶೀಕ್ಷಕ ಪ್ರಶಸ್ತಿ ವಿಜೇತ ಸರಕಾರಿ ಪ್ರೌಢಶಾಲೆ ರೆಂಜಾಳ ಇಲ್ಲಿನ ಶಿಕ್ಷಕ ವಿನಾಯಕ ನಾಯ್ಕ್ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ದೀಪ ಬೆಳಗುವುದರ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು “ಜೀವನದಲ್ಲಿ ಯಶಸ್ಸು ಒಂದೇ ಬಾರಿಗೆ ಬರೋದಿಲ್ಲ, ಸೋತಾಗ ಎದೆಗುಂದದೆ ಮರಳಿ ಯತ್ನವನ್ನು ಮಾಡುತ್ತಲೇ ಇದ್ದರೆ ನಾವು ಸಾಧಕರಾಗುತ್ತೇವೆ. ತನ್ನನ್ನು ತಾನು ನಿಯಂತ್ರಿಸಿಕೊಳ್ಳಬಲ್ಲ ವ್ಯಕ್ತಿ ಜಗತ್ತಿನ ಶ್ರೇಷ್ಟ ವ್ಯಕ್ತಿಯಾಗುತ್ತಾನೆ. ವಿಭಿನ್ನ ಕೆಲಸ ಮಾಡುವುದಕ್ಕಿಂತ ಮಾಡುವ ಕೆಲಸದಲ್ಲಿ ವಿಭಿನ್ನತೆ ಇದ್ದರೆ ಜಯ ಸುಲಭ ಸಾಧ್ಯವಾಗುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲಕ್ಷ್ಮೀ
ನಾರಾಯಣ ಕಾಮತ್ ಅವರು ಮಾತನಾಡಿ “ದೈಹಿಕ ಚಟುವಟಿಕೆಗಳ ಕೊರತೆ ನಮ್ಮಲ್ಲಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಕ್ರೀಡೆ ಆಯಸ್ಸು ವೃದ್ಧಿಗೆ ಸಹಕಾರಿಯಾಗುತ್ತದೆ, ಕ್ರೀಡೆಯಲ್ಲಿ ಸೋಲು ಗೆಲುವುಗಿಂತ ಕ್ರೀಡಾ ಸ್ಪೂರ್ತಿಗೆ ಆದ್ಯತೆ ನೀಡಬೇಕು” ಎಂದು ಹೇಳಿದರು. ತಾಲೂಕು ಕ್ರೀಡಾ ಮೇಲ್ವಿಚಾರಕ ಹಾಗೂ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವೀಂದ್ರ ಕುಮಾರ್ ಪ್ರಸ್ತಾವನೆಗೈದರು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ಸ್ವಾಗತಿಸಿ ಕು.ಲಾವಣ್ಯ ಶೆಟ್ಟಿ ವಂದಿಸಿದರು.

ಪಂದ್ಯಾಟದ ಬಾಲಕರ ವಿಭಾಗದಲ್ಲಿ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ನಿಟ್ಟೆ ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅತಿಥಿಗಳು ವಿಜೇತರಿಗೆ ಬಹುಮಾನ ವಿತರಿಸಿದರು. ಕನ್ನಡ ಉಪನ್ಯಾಸಕ ಉಮೆಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ರಸಾದ್ ಪಂದ್ಯಾಟ ಸಂಘಟಿಸಿದ್ದರು

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page