
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹದಿಹರೆಯದ ಮನೋಸಮಸ್ಯೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋತಜ್ಞರಾದ ನಾಗರಾಜಮೂರ್ತಿ ಅವರು ಸಂಪನ್ಮೂಲ
ವ್ಯಕ್ತಿಗಳಾಗಿದ್ದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು “ಹೆತ್ತವರ ಅತಿಯಾದ ನಿರೀಕ್ಷೆಗಳು ಮಕ್ಕಳಲ್ಲಿ ಒತ್ತಡ ಉಂಟುಮಾಡುವುದು ಸಹಜ. ಆದರೆ ಮಕ್ಕಳು ಇದನ್ನು ಸರಿಯಾಗಿ ನಿಭಾಯಿಸಲು ಪ್ರಯತ್ನಿಸಬೇಕು. ಯಾವುದಾದರೂ ಒಳ್ಳೆಯ ಹವ್ಯಾಸವನ್ನು ರೂಢಿಸಿಕೊಂಡರೆ ಅದು ಒತ್ತಡವನ್ನು ಕಡಿಮೆ ಮಾಡುತ್ತದೆ. ತಮ್ಮ ದೇಹ, ಬಣ್ಣ-ಮೈಕಟ್ಟುಗಳ ಬಗ್ಗೆ ಅತಿಯಾದ ಯೋಚನೆಗಳನ್ನು ಬಿಡಬೇಕು, ಕೆಟ್ಟ ಚಟಗಳು ಭವಿಷ್ಯವನ್ನು ಹಾಳುಮಾಡುತ್ತದೆ.ಇಂತವುಗಳ ಕಡೆ ಮನಸ್ಸು ವಾಲದ ಹಾಗೆ ನೋಡಿಕೊಳ್ಳಬೇಕು” ಎಂದು ಹೇಳಿದರು.
ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪಾಚಾರ್ಯರು, ಉಪಪ್ರಾಚಾರ್ಯರು, ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಮೇಘಶ್ರಿ ಕಾರ್ಯಕ್ರಮ ನಿರ್ವಹಿಸಿದರು.






















































