30.9 C
Udupi
Monday, June 1, 2026
spot_img
spot_img
HomeBlog‘ಖಜಾನೆ ಲೆಕ್ಕಾಚಾರದ ಬಳಿಕ ಬದಲಾವಣೆ'

‘ಖಜಾನೆ ಲೆಕ್ಕಾಚಾರದ ಬಳಿಕ ಬದಲಾವಣೆ’

ಅಧಿಕಾರ ಹಸ್ತಾಂತರದ ಬಗ್ಗೆ ಕೋಡಿಶ್ರೀಗಳ ನುಡಿ ಮತ್ತೆ ಸುದ್ದಿಯಲ್ಲಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ತಿಂಗಳುಗಳಿಂದ ಚರ್ಚೆಯಾಗುತ್ತಿದ್ದ ನಾಯಕತ್ವ ಬದಲಾವಣೆಗೆ ಅಂತಿಮ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಬೆಳವಣಿಗೆಯ ನಡುವೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹಿಂದೆ ನುಡಿದಿದ್ದ ಭವಿಷ್ಯ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಅಧಿಕಾರ ಹಸ್ತಾಂತರದ ಬಗ್ಗೆ ಅವರು ‘ಖಜಾನೆ ಲೆಕ್ಕಾಚಾರದ ಬಳಿಕವೇ ನಿರ್ಧಾರವಾಗಲಿದೆ’ ಎಂದು ಹೇಳಿದ್ದು, ಅದನ್ನು ರಾಜ್ಯ ಬಜೆಟ್‌ಗೆ ಹೋಲಿಕೆ ಮಾಡಲಾಗುತ್ತಿದೆ.

ಹಾಲುಮತ ಸಮುದಾಯದ ಕುರಿತು ಉಲ್ಲೇಖಿಸಿದ್ದ ಸ್ವಾಮೀಜಿಗಳು, ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ, ಅವರೇ ಸ್ವಯಂ ನಿರ್ಧಾರ ಕೈಗೊಳ್ಳಬೇಕು ಎಂದು ಭವಿಷ್ಯ ನುಡಿದಿದ್ದರು. ಇದೀಗ ಅವರ ರಾಜೀನಾಮೆಯೊಂದಿಗೆ ಆ ಹೇಳಿಕೆಯನ್ನು ಹಲವರು ನೆನಪಿಸಿಕೊಳ್ಳುತ್ತಿದ್ದಾರೆ.

ಸಂಕ್ರಾಂತಿ ಸಂದರ್ಭದಲ್ಲಿ ನುಡಿದಿದ್ದ ಇತರ ಭವಿಷ್ಯಗಳೂ ಗಮನ ಸೆಳೆದಿದ್ದು, ರಾಜ್ಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಹಿನ್ನೆಲೆಯಲ್ಲಿ ಕೋಡಿಮಠದ ಭವಿಷ್ಯವಾಣಿಗಳ ಬಗ್ಗೆ ಮತ್ತೆ ವ್ಯಾಪಕ ಚರ್ಚೆ ಆರಂಭವಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page