22.2 C
Udupi
Saturday, January 24, 2026
spot_img
spot_img
HomeBlogಖಾಸಗಿ ಕಾರ್ಯಕ್ರಮಗಳಲ್ಲಿ ಆನೆಗಳ ಬಳಕೆ ಸರಿಯೇ?

ಖಾಸಗಿ ಕಾರ್ಯಕ್ರಮಗಳಲ್ಲಿ ಆನೆಗಳ ಬಳಕೆ ಸರಿಯೇ?

ಸರ್ಕಾರದ ಅನುಮತಿಗೆ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳು ಹಾಗೂ ಮೆರವಣಿಗೆಗಳಲ್ಲಿ ಆನೆಗಳ ಬಳಕೆಯ ಕುರಿತು ಮತ್ತೆ ವಿವಾದ ಎದ್ದಿದ್ದು ಖಾಸಗಿ ಮೆರವಣಿಗೆಗಳಿಗೆ ಆನೆಗಳನ್ನು ಬಳಸಲು ಸರ್ಕಾರ ಅನುಮತಿ ನೀಡುತ್ತಿರುವುದು ನ್ಯಾಯಸಮ್ಮತವೇ ಎಂದು ಬೆಂಗಳೂರು ನಗರ ಜಿಲ್ಲಾ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸಂಘದ ಸದಸ್ಯ ಅರುಣ್ ಪ್ರಸಾದ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆಯ ಮಠದ ಟ್ರಸ್ಟ್‌ಗೆ ಅವರು ಪತ್ರ ಬರೆದಿರುವ ಅವರು ದೇವಾಲಯ ಉದ್ಘಾಟನೆಗೆ ಮಠಕ್ಕೆ ಸೇರಿದ ಹೆಣ್ಣು ಆನೆಯನ್ನು ಬಳಸಲು ವನ್ಯಜೀವಿಗಳ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಅನುಮತಿ ನೀಡಿರುವುದರ ಸಮ್ಮತತೆಯನ್ನು ಪ್ರಶ್ನಿಸಿದ್ದಾರೆ.

ಈ ಮಾರ್ಗಸೂಚಿಗಳು ಕರ್ನಾಟಕ ಹೈಕೋರ್ಟ್ ಆದೇಶದ ನಂತರ ಜಾರಿಗೊಂಡಿದ್ದು, 2015ರ ನವೆಂಬರ್ 23ರಂದು ವಿಭಾಗೀಯ ಪೀಠವು ಯಾವುದೇ ಖಾಸಗಿ ಕಾರ್ಯಕ್ರಮ, ಭಿಕ್ಷಾಟನೆ, ಪ್ರದರ್ಶನ ಅಥವಾ ಮೆರವಣಿಗೆಯಲ್ಲಿ ಆನೆಗಳ ಬಳಕೆಯನ್ನು ನಿಷೇಧಿಸುವಂತೆ ಸೂಚಿಸಿತ್ತು. ಆದರೆ ಈ ಸೂಚನೆಗಳನ್ನು ಸರ್ಕಾರ ಉಲ್ಲಂಘಿಸಿದೆ ಎಂದು ಅರುಣ್ ಪ್ರಸಾದ್ ಆರೋಪಿಸಿದ್ದಾರೆ. ನಿಷೇಧ ಮತ್ತು ನಿಯಂತ್ರಣದ ನಡುವಿನ ವ್ಯತ್ಯಾಸವನ್ನು ಅಧಿಕಾರಿಗಳು ತಿಳಿದಿದ್ದರೂ ಖಾಸಗಿ ಆನೆಗಳಿಗೆ ಅವಕಾಶ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪಿಸಿಸಿಎಫ್‌ಗೆ ಈ ಬಗ್ಗೆ ಪತ್ರ ಬರೆದರೂ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲವೆಂದೂ ತಿಳಿಸಿದ್ದಾರೆ.
ಇದಕ್ಕೆ ಬೆಂಬಲವಾಗಿ ಕರುಣೆ ಅನ್‌ಲಿಮಿಟೆಡ್ ಪ್ಲಸ್ ಆಕ್ಷನ್ (ಸಿಯುಪಿಎ)ಯ ಸುಪರ್ಣ ಗಂಗೂಲಿ ಪ್ರತಿಕ್ರಿಯಿಸಿ, ಜನಸಂದಣಿ ತುಂಬಿದ ಮೆರವಣಿಗೆಗಳಲ್ಲಿ ಆನೆಗಳನ್ನು ಬಳಸುವುದರಿಂದ ಅವುಗಳಿಗೆ ತೀವ್ರ ಒತ್ತಡ ಉಂಟಾಗುತ್ತದೆ, ರೊಚ್ಚಿಗೆದು ಅಪಾಯ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಈ ಪರಿಸ್ಥಿತಿ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುವಂತೆಯೇ ಆನೆಗಳ ಆರೋಗ್ಯಕ್ಕೂ ಹಾನಿಕಾರಕವಾಗಿದ್ದು, ಸರ್ಕಾರ ಈ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page