
ಬೆಂಗಳೂರು: ಮತ ತಿರುಚಿದ ಆರೋಪದ ಪ್ರಕರಣದಲ್ಲಿ ಶೃಂಗೇರಿಯ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಜೀವರಾಜ್ ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದು ಮಂಗಳವಾರ ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿರುವ ರಜಾಕಾಲದ ಏಕಸದಸ್ಯ ಪೀಠವು
ವಾದ-ಪ್ರತಿವಾದಗಳನ್ನು ಆಲಿಸಿ, ಜೀವರಾಜ್ ವಿರುದ್ಧದ ಕ್ರಿಮಿನಲ್ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡುವುದರ ಜೊತೆಗೆ ಮುಂದಿನ ವಿಚಾರಣೆಯನ್ನು ಮೇ 7ಕ್ಕೆ ನಿಗದಿಪಡಿಸಿದೆ.




















