
ಮೈಸೂರು: ಹಾಸನ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ‘ಸರ್ಕಾರವು ಅಪಘಾತಗಳನ್ನ ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದು ಆದರೂ ಡ್ರೈವರ್ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ.
ಮೃತರ ಕುಟುಂಬ ವರ್ಗಕ್ಕೆ ನಮ್ಮ ಸಂತಾಪ ಇದೆ. ಘಟನೆ ತಿಳಿಯುತ್ತಿದ್ದಂತೆ ಉಸ್ತುವಾರಿ ಸಚಿವ ಕೃಷ್ಣೇಬೇರೇಗೌಡ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಘೋಷಣೆ ಮಾಡುವಂತೆ ಹೇಳಿದ್ದೆ. ಅದರಂತೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ವಿವರಿಸಿದರು.













