
ಬೆಂಗಳೂರು: ಸಾಲುಮರದ ತಿಮ್ಮಕ್ಕ ಹಾಗೂ ಅವರ ಸಾಕು ಮಗ ಉಮೇಶ್ ಅವರು ಸೋಮವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿ ತಮ್ಮ ಜೀವನಾಧಾರಿತ ಚಿತ್ರ ‘ವೃಕ್ಷಮಾತೆ’ ಗೆ ನಮ್ಮ ಅನುಮತಿ ಇಲ್ಲ. ಹೀಗಾಗಿ ಈ ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು’ ಎಂದು ದೂರು ನೀಡಿದ್ದಾರೆ.
‘ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಕ್ಚರ್ಸ್ ಬ್ಯಾನರ್ ಮೂಲಕ ‘ವೃಕ್ಷಮಾತೆ’ ಹೆಸರಿನಲ್ಲಿ ದಿಲೀಪ್ ಕುಮಾರ್ ಎಚ್ಆರ್, ಸೌಜನ್ಯ ಡಿ ವಿ, ಎ ಸಂತೋಷ್ ಮುರಳಿ ಹಾಗೂ ಒರಟ ಶ್ರೀ ಅವರು ತಿಮ್ಮಕ್ಕ ಜೀವನ ಕಥೆಯನ್ನು ಆಧರಿಸಿ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ನಮ್ಮಿಂದ ಯಾರೂ ಅನುಮತಿ ಪಡೆದಿಲ್ಲ. ನಮ್ಮ ಅನುಮತಿ ಇಲ್ಲದೆ ಶೂಟಿಂಗ್ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿರುವ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು ಅವರು, ‘ಚಿತ್ರತಂಡವನ್ನು ಕರೆಸಿ ಮಾತನಾಡುತ್ತೇವೆ’ ಎಂದು ಹೇಳಿದ್ದಾರೆ.



















