
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿಯಲ್ಲಿ ಶೇಕಡ 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವವರಿಗೆ ಪ್ರವೇಶ ಪತ್ರ ನೀಡುವುದಿಲ್ಲ ಎಂದು ತಿಳಿಸಿದೆ.
ರಾಜ್ಯಾದ್ಯಂತ ಮಾರ್ಚ್ 1ರಿಂದ 20ರವರೆಗೆ ವಾರ್ಷಿಕ ಪರೀಕ್ಷೆ-1 ನಡೆಯಲಿದ್ದು ಪರೀಕ್ಷಾ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ.
ಆದರೆ 75% ಹಾಜರಾತಿ ಕಡ್ಡಾಯವಾಗಿದ್ದು ಹೀಗಾಗಿ ಇದಕ್ಕಿಂತ ಕಡಿಮೆ ಹಾಜರಾತಿ ಇರುವ ವಿದ್ಯಾರ್ಥಿಗಳ ಮಾಹಿತಿಯನ್ನು ನೀಡುವಂತೆ ಪಿಯು ಕಾಲೇಜುಗಳಿಗೆ ಸೂಚಿಸಿದೆ.





















