
ನವದೆಹಲಿ: ಇಂದು ಸುಪ್ರೀಂ ಕೋರ್ಟ್ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳ ಮೇಲೆ ವಿಧಿಸಲಾಗಿದ್ದ ನಿಷೇಧವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಯ ವಿಚಾರಣೆ ನಡೆಸಲಿದೆ.
ಈ ಮೇಲ್ಮನವಿಯನ್ನು ದೇವಸ್ಥಾನ ಸಂಸ್ಥೆಯ ಕಾರ್ಯದರ್ಶಿಯಾದ ಹರ್ಷೇಂದ್ರ ಕುಮಾರ್ ಡಿ ಅವರು ಸಲ್ಲಿಸಿದ್ದು ಸುಮಾರು 8,000 ಯೂಟ್ಯೂಬ್ ವಾಹಿನಿಗಳು ದೇವಸ್ಥಾನದ ಆಡಳಿತದ ವಿರುದ್ಧ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡುತ್ತಿದೆ ಎಂದು ವಾದಿಸಿ ಶುಕ್ರವಾರವೇ ಈ ಬಗ್ಗೆ ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ನ್ಯಾಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದ್ದಾರೆ.