ಕೃತ್ಯ ಉದ್ದೇಶಪೂರ್ವಕ, ಕಾಂಗ್ರೆಸ್ ಸರಕಾರದಲ್ಲಿ ಹಿಂದೂಗಳ ರಕ್ಷಣೆ ಪ್ರಶ್ನಾರ್ಥಕ : ಶಾಸಕ ವಿ.ಸುನಿಲ್ ಕುಮಾರ್ ಕಿಡಿ

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಅನ್ಯಕೋಮಿನ ಯುವಕರಿಂದ ನಡೆದ ಕಲ್ಲು ತೂರಾಟದ ವಿಚಾರವಾಗಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದೂ ಆಚರಣೆಗಳಿದ ಅಡ್ಡಿ ಪಡಿಸುವ ಘಟನೆಗಳು ಹೆಚ್ಚಾಗುತ್ತಿದೆ. ನಾಗಮಂಗಲದ ಘಟನೆ ಇದಕ್ಕೆಲ್ಲ ನಿದರ್ಶನ ವಿತ್ತಂತೆ ಇದೆ. ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯ ಉದ್ದೇಶಪೂರ್ವಕವಾಗಿಯೇ ದಾಂದಲೆ ನಡೆಸಿದ್ದಾರೆ.ಆ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್ ಸ್ಪೋಟಿಸಿ ತಲ್ವಾರ್ ಝಳಪಿಸಿದ್ದಾರೆ. ನಾವು ನಾಗಮಂಗಲದಲ್ಲಿದ್ದೇವೆಯೋ ಅಥವಾ ಪಾಕಿಸ್ತಾನದಲ್ಲೋ ಎಂಬ ಸಂಶಯ ಮೂಡುತಿದೆ ಎನ್ನುವ ಮೂಲಕ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.













