
ಹೊಸದಿಲ್ಲಿ: ಮಂಗಳವಾರ ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗಾಗಿನ ಮೆಟ್ರಿಕ್ ನಂತರದ ಸ್ಕಾಲರ್ಶಿಪ್ ಯೋಜನೆಯನ್ನು ನಿಲ್ಲಿಸುವ ಯಾವುದೇ ಪ್ರಸ್ತಾವನೆ ತನ್ನ ಮುಂದೆ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
2025-26ರ ಶೈಕ್ಷಣಿಕ ವರ್ಷದ ನಂತರ ಈ ಯೋಜನೆ ಸ್ಥಗಿತಗೊಳ್ಳುವ ಸಾಧ್ಯತೆಯ ಬಗ್ಗೆ ಕಳವಳಗಳು ವ್ಯಕ್ತವಾಗಿದ್ದು ಈ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ಸಹಾಯಕ ಸಚಿವ ರಾಮದಾಸ್ ಅಠವಳೆ ಅವರು ಉನ್ನತ ಶಿಕ್ಷಣದಲ್ಲಿ ಎಸ್ ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಅನುಪಾತವನ್ನು ಹೆಚ್ಚಿಸುವುದೇ ಈ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಆದ್ದರಿಂದ ಅದನ್ನು ನಿಲ್ಲಿಸುವ ಯಾವುದೇ ಯೋಚನೆ ಸರಕಾರಕ್ಕೆ ಇಲ್ಲ ಎಂದು ತಿಳಿಸಿದ್ದಾರೆ.