
ತ್ರಿನಯನಿ ಧಾರವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ನಟಿಸಿದ್ದ ಚಂದ್ರಕಾಂತ್ ಅಲಿಯಾಸ್ ಚಂದು ತೆಲಂಗಾಣದ ಮಣಿಕೊಂಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಅಪಘಾತದಲ್ಲಿ ನಟಿ ಪವಿತ್ರಾ ಜಯರಾಮ್ ಅವರು ಮೃತಪಟ್ಟಿದ್ದು ಅದೇ ಕಾರಿನಲ್ಲಿದ್ದ ಚಂದು ತನ್ನ ಕಣ್ಣೆದುರೇ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದರು. ಅದೇ ನೋವಿನಲ್ಲಿ ಶುಕ್ರವಾರ ನೇಣಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಚಂದು ಆತ್ಮಹತ್ಯೆಗೆ ನಿಖರ ಕಾರಣವೇನು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪವಿತ್ರಾ-ಚಂದು ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದರು. ಜೊತೆಯಲ್ಲೇ ವಾಸಿಸುತ್ತಿದ್ದರು, ಮದುವೆಯಾಗಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.
ಚಂದು ಅವರು ಪತ್ನಿ ಶಿಲ್ಪಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಚಂದು 2015 ರಲ್ಲಿ ಶಿಲ್ಪಾ ಪ್ರೇಮಾ ಅವರನ್ನು ವಿವಾಹವಾಗಿದ್ದರು. ಸದ್ಯ ಚಂದು ಅವರು ‘ರಾಧಮ್ಮ ಪೆಳ್ಳಿ’ ಮತ್ತು ‘ಕಾರ್ತಿಕ ದೀಪಂ’ ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು.