
ಪುತ್ತೂರು: ಜುಲೈ 22ರಂದು ಮಂಗಳವಾರ ಸಂಜೆ ಕೆಎಸ್ಆರ್ಟಿಸಿ ವೇಗದೂತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಅದೇ ಬಸ್ನಲ್ಲಿದ್ದ ಯುವಕನೊಬ್ಬ ಅನುಚಿತವಾಗಿ ವರ್ತಿಸುತ್ತಿದ್ದು ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಈ ಕುರಿತು ಮಾಹಿತಿ ಪಡೆದ ಪೊಲೀಸರ ತಂಡವು ಪುತ್ತೂರು ಬಸ್ ನಿಲ್ದಾಣದಲ್ಲಿ ಆತನಿಗಾಗಿ ಕಾದು ಕುಳಿತಿದ್ದು ಈ ವಿಚಾರ ತಿಳಿದ ಆರೋಪಿಯು ಬಸ್ನಿಂದ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಅಂಗಡಿಯಲ್ಲಿ ಅಡಗಿ ಕುಳಿತಿದ್ದ ಎನ್ನಲಾಗಿದೆ.
ಆದರೆ ಈ ವೇಳೆ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದು ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.