ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಂತ್ರಸ್ತ ಬಾಲಕಿಯರು

ಚಿತ್ರದುರ್ಗ: ಸೆಷನ್ಸ್ ನ್ಯಾಯಾಲಯವು ಲೈಂಗಿಕ ದೌರ್ಜನ್ಯ ಆರೋಪದ ಪೋಕ್ಸೋ ಪ್ರಕರಣವೊಂದರಲ್ಲಿ ಶಿವಮೂರ್ತಿ ಮುರುಘಾ ಶರಣರು ಹಾಗೂ ಇನ್ನಿಬ್ಬರನ್ನು ಖುಲಾಸಗೊಳಿಸಿದ್ದು ಇದನ್ನು ಪ್ರಶ್ನಿಸಿ ಸಂತ್ರಸ್ತ ಬಾಲಕಿಯರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಮೈಸೂರಿನ ನಜರಾಬಾದ್ ಠಾಣೆಯಲ್ಲಿ 2022 ಆಗಸ್ಟ್ 26ರಂದು ಪ್ರಕರಣ ದಾಖಲಾಗಿದ್ದು ಸುಮಾರು ಒಂದುವರೆ ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ. ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠವು ಸಾಕ್ಷಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈಗ ಇದನ್ನು ಪ್ರಶ್ನಿಸಿ ಸಂತ್ರಸ್ತೆಯರು ಹೋರಾಟಕ್ಕೆ ಮುಂದಾಗಿದ್ದಾರೆ.
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎರಡು ಪ್ರಕರಣಗಳು ದಾಖಲಾಗಿದ್ದು ಒಂದು ಪ್ರಕರಣದಲ್ಲಿ ಖುಲಾಸೆಗೊಂಡಿದ್ದರೂ ಇನ್ನೊಂದು ಪ್ರಕರಣದಲ್ಲಿ ಸಂಪೂರ್ಣ ಸ್ವಾತಂತ್ರ ದೊರೆತಿಲ್ಲ. ಈ 2ನೇ ಪ್ರಕರಣದ ವಿಚಾರಣೆ ಮುಂದಿನ ತಿಂಗಳಲ್ಲಿ ನಡೆಯಲಿದೆ.





