
ಬೆಂಗಳೂರು: ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಶವಾಗಾರ, ಅಡುಗೆ ಕೋಣೆ, ಬೋಧನಾ ಬ್ಲಾಕ್, ಲಾಂಡ್ರಿ ಬ್ಲಾಕ್ ಮತ್ತು ಜೈವಿಕ ವೈದ್ಯಕೀಯ ತ್ಯಾಜ್ಯ ಕೊಠಡಿ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿನ ತಿಂಗಳೊಳಗೆ ಕರ್ನಾಟಕದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್ಗಳನ್ನು ಆರಂಭಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ರಾಜ್ಯಾದ್ಯಂತ ಜಿಲ್ಲಾ ಆಸ್ಪತ್ರೆಗಳಲ್ಲಿ ಕಿಮೋಥೆರಪಿ ಡೇಕೇರ್ ಕೇಂದ್ರಗಳನ್ನು ಸ್ಥಾಪಿಸಿದರೆ, ಗ್ರಾಮೀಣ ಭಾಗದ ಕ್ಯಾನ್ಸರ್ ರೋಗಿಗಳು ದೂರ ಪ್ರಯಾಣಿಸುವ ಅಗತ್ಯವಿಲ್ಲ. ಹೀಗಾಗಿ ಒಂದು ತಿಂಗಳ ಅವಧಿಯಲ್ಲಿ ಕಿಮೋಥೆರಪಿ ಡೇಕೇರ್ ಸೆಂಟರ್ಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದ್ದಾರೆ.













