
ಬೆಂಗಳೂರು: ಗೃಹ ಸಚಿವ ಜಿ ಪರಮೇಶ್ವರ್ ಸುದ್ದಿಗಾರರೊಂದಿಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಂಡ ಹೀನಾಯ ಸೋಲಿನ ಕುರಿತು ಮಾತನಾಡಿ, ಫಲಿತಾಂಶಗಳೆಲ್ಲ ಪ್ರಕಟವಾದ ಬಳಿಕ ಎಐಸಿಸಿ ಹಾಗೂ ಕೆಪಿಸಿಸಿಯೂ ಅದರ ಬಗ್ಗೆ ವಿಶ್ಲೇಷಣೆ ಮಾಡಲಿದೆ ಎಂದು ಹೇಳಿದರು.
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯ ಚುನಾವಣೆಗಳ ಮೇಲೆ ಪ್ರಭಾವ ಬೀರಲ್ಲ, ಲೋಕಸಭಾ ಚುನಾವಣೆಯಲ್ಲಿ ಬೇರೆ ವಿಷಯಗಳು ಚರ್ಚೆಗೆ ಬಂದು ಮೈತ್ರಿ ಏರ್ಪಡುತ್ತದೆ, ವಿಧಾನಸಭಾ ಚುನಾವಣೆ ಸ್ಥಳೀಯ ಇಶ್ಯೂಗಳ ಮೇಲೆ ನಡೆಯುತ್ತದೆ, ಮೈತ್ರಿ ವರ್ಕೌಟ್ ಅಗಲ್ಲ ಎಂದರು.




















