28.8 C
Udupi
Wednesday, May 6, 2026
spot_img
spot_img
HomeBlogಫೆ.1 ಉಡುಪಿ ಅಂದು-ಇಂದು ಚಿತ್ರ ಸಂಪುಟ ಲೋಕಾರ್ಪಣೆ

ಫೆ.1 ಉಡುಪಿ ಅಂದು-ಇಂದು ಚಿತ್ರ ಸಂಪುಟ ಲೋಕಾರ್ಪಣೆ

ಉಡುಪಿ, ಮೂರುದಶಕಗಳ ಉಡುಪಿಯ ಪ್ರಗತಿಯ ಕುರಿತಾಗಿ ಚಿತ್ರಗಳ ಮೂಲಕ ಸಾಕ್ಷೀಕರಿಸುವ ವಿಶಿಷ್ಟ ಮಿನಿ ಕಾಫಿ ಟೇಬಲ್ ಬುಕ್ ಫೆ. 1 ರಂದು ಉಡುಪಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು
ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಅಧ್ಯಕ್ಷ ಶ್ರೀ ರವಿರಾಜ್ ಎಚ್. ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭೂತರಾಜ ಪ್ರಕಾಶನದ 4 ನೇ ಕೃತಿ ಇದಾಗಿದ್ದು ಉಡುಪಿಯ 30 ವರ್ಷಗಳ ಬೆಳಣಿಗೆ ಕುರಿತು ಈ ಪುಸ್ತಕ ಬೆಳಕು ಚೆಲ್ಲಲಿದೆ.

ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಚಿತ್ರ ಕಲಾವಿದ ಆಸ್ಟ್ರೋ 30ವರ್ಷಗಳ ಹಳೆಯ ಚಿತ್ರಗಳನ್ನು ನೀಡಿದ್ದಾರೆ.

ಉಡುಪಿ ಜಿಲ್ಲೆಗೂ ಮುನ್ನ ಇದ್ದ ಪರಿಸರ ಮತ್ತು ಅಭಿವೃದ್ಧಿ ಹೊಂದಿದ ಅದೇ ಸ್ಥಳಗಳನ್ನ ಅಕ್ಕ ಪಕ್ಕದಲ್ಲಿರಿಸಿ ಪುಸ್ತಕವನ್ನು ಕಟ್ಟಲಾಗಿದೆ ಎಂದು ಪ್ರಕಾಶಕರಾದ ಶ್ರೀಮತಿ ಪ್ರವೀಣಾ ಮೋಹನ್ ಅವರು ಮಾಹಿತಿ ನೀಡಿದ್ದಾರೆ.

ಉಡುಪಿಯ ಸ್ಥಿತಿಗತಿಯ ಬಗ್ಗೆ ಹಿಂದಿನ ಮತ್ತು ವರ್ತಮಾನದ ಕುರಿತು ಸಚಿತ್ರ ಮಾಹಿತಿ ನೀಡುವ ಈ ಪುಸ್ತಕವು ಭವಿಷ್ಯದ ಬೆಳಣಿಗೆಯ ಕುರಿತು ಎಚ್ಚರಿಕೆಯ ಗಂಟೆಯನ್ನೂ ಬಾರಿಸುತ್ತದೆ.

ಉದಯವಾಣಿಯ ವಿಶ್ರಾಂತ ಸಂಪಾದಕರಾದ ಶ್ರೀ ಗುರುರಾಜ್ ಮುನ್ನುಡಿ ಬರೆದಿದ್ದು, ಫೋಟೋಗ್ರಫಿ ಸೊಸೈಟಿ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀ ನಾರಾಯಣ ಪಂಜೆ ಸಂದೇಶ ನೀಡಿದ್ದಾರೆ.

ಲೋಕಾರ್ಪಣೆ ಕಾರ್ಯಕ್ರಮವು ಉಡುಪಿ ಶಾರದಾ ಕಲ್ಯಾಣ ಮಂಟಪದ ಬಳಿ ಇರುವ ಐವೈಸಿ ಯಕ್ಷಗಾನ ಕಲಾರಂಗದ ಹವಾ ನಿಯಂತ್ರಿತ ಸಭಾಂಗಣದಲ್ಲಿ ಫೆ. 1 ರಂದು ಸಂಜೆ 4.30 ಕ್ಕೆ ನಡೆಯಲಿದೆ.

ಮಣಿಪಾಲ ವಿವಿ ಯ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಕೃತಿ ಬಿಡುಗಡೆಗೊಳಿಸಲಿದ್ದಾರೆ.

ಮಣಿಪಾಲ್ ಮೀಡಿಯಾ ನೆಟ್ ವರ್ಕ್ ನ ಕಾರ್ಯ ನಿರ್ವಾಹಕ ನಿರ್ದೇಶಕರಾದ ಶ್ರೀ ಸತೀಶ್ ಯು ಪೈ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕ ಯಶ್ ಪಾಲ ಸುವರ್ಣ, ಅದಾನಿ ಸಮೂಹದ ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಿಶೋರ್ ಆಳ್ವ, ಹಿರಿಯ ಛಾಯಾಚಿತ್ರ ಕಲಾವಿದ ಯಜ್ಞ ಮಂಗಳೂರು ಶುಭ ಹಾರೈಸಲಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page