ಮಹೇಶ್ ತಿಮರೋಡಿಗೆ ,14 ದಿನ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ, ಮಹೇಶ್ ಶೆಟ್ಟಿ ತಿಮರೋಡಿಯನ್ನು ಇಂದು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇದೀಗ ತಾಲೂಕು ಸಂಚಾರಿ ಪೀಠವು ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಹೋರಾಟಗಾರ ಮಹೇಶ್ ತಿಮರೋಡಿಗೆ ಎರಡು ಬಾರಿ ನೋಟಿಸು ನೀಡಲಾಗಿದ್ದು, ಸರಿಯಾದ ಉತ್ತರ ನೀಡದೆ ಇರುವ ಕಾರಣ ಅವರನ್ನು ಇಂದು ಉಜಿರೆಯಿಂದ ವಶಕ್ಕೆ ಪಡೆಯಲಾಗಿತ್ತು.



















