
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು, ಇವರು ನಡೆಸಿದ ಭರತನಾಟ್ಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಅನ್ವಿತಾ ಮುಗೆರಾಯ ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ ಶೇಕಡಾವಾರು 95.67 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದಿರುತ್ತಾರೆ.
7ನೇ ತರಗತಿ ವಿದ್ಯಾರ್ಥಿಗಳಾದ ಅವನಿ ವಿ.ಕುಡ್ವ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಶೇಕಡಾ 98.75 ಅಂಕಗಳು, ಗ್ರೀಷ್ಮ ಶೇಕಡಾ 75 ಅಂಕಗಳನ್ನು ಪಡೆದಿರುತ್ತಾರೆ. ಸೀನಿಯರ್ ವಿಭಾಗದ ಪರೀಕ್ಷೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ದೀಪಾಲಿ ಸುವರ್ಣ ಶೇಕಡಾ 83 ಅಂಕಗಳು, ಆರ್ . ಶ್ರೀಯಾ ಪ್ರಭು ಶೇಕಡಾ 80.05 ಅಂಕಗಳು, ತಸ್ಮೈ ಶೇಕಡಾ 70 ಅಂಕಗಳು ಧನ್ವಿ .ಡಿ ಶೇಕಡಾ 65 ಅಂಕಗಳನ್ನು ಪಡೆದಿರುತ್ತಾರೆ.ಇವರಿಗೆ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ , ಶಾಲಾ ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಕವೃಂದ ಶುಭ ಹಾರೈಸಿರುತ್ತಾರೆ.






















