
ಮಂಗಳೂರು: ವಿನ್ಸೆಂಟ್ ಕ್ರಾಸ್ತಾ (52) ಎಂಬ ವ್ಯಕ್ತಿಯೊಬ್ಬರು ಆಮ್ಲೆಟ್ ತಿನ್ನುತ್ತಿರುವಾಗ ಗಂಟಲಿನಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಎಂಬಲ್ಲಿ ನಡೆದಿದೆ.
ವಿನ್ಸೆಂಟ್ ಅವರು ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಆಹಾರ ಗಂಟಲಿನಲ್ಲಿ ಸಿಲುಕಿಕೊಂಡು ಒದ್ದಾಡಿದರು. ಕೂಡಲೇ ಅವರನ್ನು ಕುಂಬಳೆ ಆಸ್ಪತ್ರೆಗೆ ಕರೆದೊಯ್ಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಹಸ್ತಾಂತರಿಸಲಾಗಿದ್ದು ಬದಿಯಡ್ಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.






















































