
ಉಳ್ಳಾಲ: ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ರೆಸಾರ್ಟ್ ಒಂದರ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ರೆಸಾರ್ಟ್ ನ ಮಾಲಿಕ ಮನೋಹರ್ ಹಾಗೂ ಮ್ಯಾನೇಜರ್ ಭರತ್ ಎಂಬವರನ್ನು ಬಂಧಿಸಿದ್ದಾರೆ.
ಕೀರ್ತನ, ನಿಶಿತಾ ಹಾಗೂ ಪಾರ್ವತಿ ಎಂಬವರು ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದು ಇವರ ವ್ರತ ದೇಹವನ್ನು ಅವರ ಪೋಷಕರಿಗೆ ರವಿವಾರ ತಡರಾತ್ರಿ ಹಸ್ತಾಂತರಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.



















