ಮೇ.17,ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಮಾಳ
ಇದರ, ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮೇ 17 ಶನಿವಾರ ಸಂಘದ ಕೆರ್ವಾಶೆ ಶಾಖೆ, ಗ್ರಾಮ ಪಂಚಾಯತ್ ಹಿಂಭಾಗ, ಕೆರ್ವಾಶೆ ಕಾರ್ಕಳ ಇಲ್ಲಿ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ವಹಿಸಿಕೊಳ್ಳಲಿದ್ದಾರೆ , ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕರಾದ ವಿ. ಸುನಿಲ್ ಕುಮಾರ್ ನೆರವೇರಿಸಲಿದ್ದಾರೆ.
ಭದ್ರತಾ ಕೊಠಡಿ ಉದ್ಘಾಟನೆ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ರಿ. ಮುನಿಯಾಲು ಇದರ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು , ಗಣಕಯಂತ್ರ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ. ಗಣೇಶ್ ಕಾರ್ಣಿಕ್, ಗ್ರಾಮ ಪಂಚಾಯತ್ ಕೆರ್ವಾಶೆ ಅಧ್ಯಕ್ಷರಾದ ಸುನಿತಾ ಪೂಜಾರಿ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ ಮತ್ತಿತರರು ಉಪಸ್ಥಿತರಿರರಿದ್ದಾರೆ.