
ಬೀದರ್: ಬಸವಕಲ್ಯಾಣದಲ್ಲಿ ಹುಲಸೂರು ಮಠದ ಪೀಠಾಧಿಪತಿ ಶ್ರೀ ಶಿವಾನಂದ ಸ್ವಾಮೀಜಿ ಅವರು ಅಲ್ಲಿ ನಡೆದ ಶರಣ ಸಂಸ್ಕ್ರತಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ವಾಪಸ್ ಪಡೆಯದೇ ಇದ್ರೆ ಮುಂದಿನ ಸಲ ಬಸನಗೌಡ ಪಾಟೀಲ್ ಯತ್ನಾಳ್ಗೆ ಸೋಲು ಖಚಿತ, ಒಂದು ವೇಳೆ ಅವರು ಸೋಲದೆ ಇದ್ರೆ ನಾನು ನನ್ನ ಮಠ ತ್ಯಾಗ ಮಾಡುತ್ತೇನೆ ಎಂದು ಸವಾಲು ಎಸೆದಿದ್ದಾರೆ.
ಯತ್ನಾಳ್ಗೆ ಮಾನ ಮರ್ಯಾದೆ ಇದ್ರೆ ಲಿಂಗಾಯತರಲ್ಲಿ ಕ್ಷೆಮೆ ಕೇಳಬೇಕು. ಇಲ್ಲಾವಾದ್ರೆ ರಾಜ್ಯದ ಲಿಂಗಾಯತರು ಇಲ್ಲಿಂದ ಯತ್ನಾಳ್ರನ್ನು ಓಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡೋರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ಹೆಸರು ಮಾತ್ರ ಬಸವರಾಜ ಆದ್ರೆ ನೀನು ಬೆಂಕಿ ಹಚ್ಚುವ ಬಸವರಾಜ. ಬಸವಣ್ಣನವರು ಸೇರಿದಂತೆ ಎಲ್ಲರ ಬಗ್ಗೆ ಹಗುರವಾಗಿ ಮತಾನಾಡುತ್ತಿದ್ದು, ಯತ್ನಾಳ್ ತಾನೊಬ್ಬನೇ ತೀಸ್ಮರ್ಕಾ ಎಂದು ತಿಳಿದುಕೊಂಡಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.



















