
ಕೊಟ್ಟಿಗೆಹಾರ : ಗೂಗಲ್ ಮ್ಯಾಪ್ ನಲ್ಲಿ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
ಕಳೆದ ಮೂರ್ನಾಲ್ಕು ದಿನಗಳಿಂದ ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಬಾರಿ ಮಳೆಯಾಗುತ್ತಿದ್ದು ಗೂಗಲ್ ಮ್ಯಾಪ್ನಲ್ಲಿ ರಾಣಿ ಝರಿ ಪ್ರದೇಶ ಬಿರುಕು ಬಿಟ್ಟಿರುವ ರೀತಿಯಲ್ಲಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗಾಕಾರಿಗಳು ರಾಣಿಝರಿ ಸಮೀಪ ಬಾರಿ ಮಳೆಯಾಗುತ್ತಿರುವುದರಿಂದಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಉಪವಿಭಾಗಧಿಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಲ್ಲಿ ಯಾವುದೇ ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.













