
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮೆಟಾ ಪ್ಲಾಟ್ಫಾರ್ಮ್ಗಳಲ್ಲಿ ಅನುವಾದ ದೋಷದ ಬಗ್ಗೆ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಕನ್ನಡದ ವಿಷಯಗಳ ದೋಷಪೂರಿತ ಅನುವಾದವು ಸತ್ಯಾಂಶಗಳನ್ನೇ ನಾಶಪಡುತ್ತಿದೆ. ಈ ವೇದಿಕೆಯ ಬಳಕೆದಾರರನ್ನು ತಪ್ಪುಗ್ರಹಿಕೆಗೆ ಕಾರಣವಾಗುತ್ತಿದೆ. ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅಸಮಾಧಾನ ಹೊರಹಾಕಿದ ಬೆನ್ನಲ್ಲೇ, ಫೇಸ್ಬುಕ್ ಮಾತೃ ಸಂಸ್ಥೆ ಮೆಟಾ ಕ್ಷಮೆಯಾಚಿಸಿದೆ.
ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.
ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದೆ.