
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಗಂಗಾ ನದಿಯಲ್ಲಿ ದೋಣಿ ವಿಹಾರ ನಡೆಸುತ್ತಾ ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಎಂದು ಹಿಂದೂ-ಮುಸ್ಲಿಂ ರಾಜಕೀಯ ಮಾಡಲು ಪ್ರಾರಂಭ ಮಾಡುವನೋ ಅದೇ ದಿನ ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯನಲ್ಲ. ನಾನು ಎಂದೂ ಹಿಂದೂ-ಮುಸ್ಲಿಂ ರಾಜಕೀಯ ಮಾಡಲ್ಲ. ಇದು ನನ್ನ ಸಂಕಲ್ಪ’ ಎಂದು ಹೇಳಿದ್ದಾರೆ.
ಹೆಚ್ಚು ಮಕ್ಕಳ ಹೆರುವವರಿಗೆ ದೇಶದ ಆಸ್ತಿ ಹಂಚಿಕೆಯಾಗಲಿದೆ ಎಂದು ನಾನು ಹೇಳುವಾಗ ಎಲ್ಲೂ ಮುಸ್ಲಿಂ ಎಂಬ ಪದ ಬಳಸಿಲ್ಲ. ಮುಸ್ಲಿಮರನ್ನು ಉದ್ದೇಶಿಸಿಯೇ ನಾನು ಹೇಳಿಕೆ ನೀಡಿದೆ ಎಂಬ ವರದಿಗಳನ್ನು ನೋಡಿ ನಾನು ಅವಾಕ್ಕಾಗಿದ್ದೇನೆ. 11 ಮಕ್ಕಳಿದ್ದಾರೆ ಎಂಬ ಹೇಳಿಕೆ ಬಂದಾಗ ಏಕೆ ಅದನ್ನು ಮುಸ್ಲಿಮರಿಗೇ ಜೋಡಿಸುತ್ತೀರಿ? ಏಕೆ ಮುಸಲ್ಮಾನರಿಗೆ ಅನ್ಯಾಯ ಮಾಡುತ್ತೀರಿ ನೀವು? ಇಲ್ಲಿನ ಬಡ ಕುಟುಂಬಗಳಲ್ಲೂ ಇದೇ ಪರಿಸ್ಥಿತಿ ಇದೆ. ಅವರಿಗೆ ಮಕ್ಕಳನ್ನು ಓದಿಸಲೂ ಆಗುತ್ತಿಲ್ಲ, ಯಾವುದೇ ಸಮಾಜ ಇರಲಿ. ಎಲ್ಲಿ ಬಡತನ ಇದೆಯೋ ಅಲ್ಲಿ ಮಕ್ಕಳೂ ಹೆಚ್ಚಿದ್ದಾರೆ. ನಾನು ಎಲ್ಲೂ ಹಿಂದೂ-ಮುಸ್ಲಿಂ ಎಂದಿಲ್ಲ. ನಾನು ಹೇಳಿದ್ದೇನು ಎಂದರೆ ಎಷ್ಟು ಮಕ್ಕಳನ್ನು ನೀವು ಹೊಂದಿದ್ದೀರೋ ಆ ಮಕ್ಕಳ ಪಾಲನೆ-ಪೋಷಣೆ ಮಾಡಬೇಕು. ಸರ್ಕಾರವು ಆ ಮಕ್ಕಳನ್ನು ಪಾಲನೆ ಮಾಡುವಂಥ ಪರಿಸ್ಥಿತಿ ಸೃಷ್ಟಿಸಬಾರದು’ ಎಂಬುದಾಗಿತ್ತು’ ಎಂದು ಸ್ಪಷ್ಟನೆ ನೀಡಿದರು.
ನಾನು ಯಾವತ್ತೂ ಮುಸ್ಲಿಮರ ಮೇಲೆ ಪ್ರೀತಿ ಹೊಂದಿದ್ದೇನೆ ಎಂಬ ಹೇಳಿಕೆ ನೀಡುತ್ತ ಅದನ್ನು ಪ್ರಚಾರ ಮಾಡಲು ಇಷ್ಟಪಡುವುದಿಲ್ಲ. ಯಾವತ್ತು ಪ್ರಚಾರ ಮಾಡಲು ಇಷ್ಟಪಡುವನೋ ಅಂದು ನಾನು ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯ ಎನ್ನಿಸಿಕೊಳ್ಳಲ್ಲ. ನಾನು ಮತ ಬ್ಯಾಂಕ್ಗಾಗಿ ಕೆಲಸ ಮಾಡುವುದಿಲ್ಲ. ನಾನು ಸಟ್ಕಾ ಸಾಥ್, ಸಬ್ಬಾ ವಿಕಾಸ್ ಅನ್ನು ನಂಬುತ್ತೇನೆ’ ಎಂದು ಮೋದಿ ಹೇಳಿದರು